Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...