Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...