Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...