Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...