HomeUncategorizedಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದವು

- Advertisement -
- Advertisement -

ಸುಶಾಂತ್ ಸಾವಿನ ಪ್ರಕರಣದಲ್ಲಿ ಬೇಜವಾಬ್ದಾರಿಯುತ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್‌ ಇಂದು ನೋಟಿಸ್ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು.

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಟೈಮ್ಸ್‌ ನೌ ನವಿಕಾ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ನೋಡಿಸ್‌ ನೀಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಈ ಪ್ರಕರಣವನ್ನು ನ್ಯಾಯಮೂರ್ತಿ ರಾಜೀವ್ ಶಖ್ದರ್ ವಿಚಾರಣೆ ನಡೆಸುತ್ತಿದ್ದಾರೆ. ಬಾಲಿವುಡ್ ಪರವಾಗಿ ಹಾಜರಾದ ವಕೀಲ ರಾಜೀವ್ ನಾಯರ್, “ಮಾನಹಾನಿ, ಗೌಪ್ಯತೆಯ ಹಕ್ಕಿನ ಉಲ್ಲಂಘನೆ, ವೈಯಕ್ತಿಕ ಸುರಕ್ಷತೆಗೆ ಧಕ್ಕೆ ತರುವುದು, ಹಾನಿಕಾರಕ ಸುಳ್ಳು, ಪ್ರೋಗ್ರಾಂ ಕೋಡ್ ಉಲ್ಲಂಘನೆ, ನ್ಯಾಯಯುತ ವಿಚಾರಣೆಯ ನಿರೀಕ್ಷೆಗಳಿಗೆ ವಿರುದ್ಧವಾದ ಸಮಾನಾಂತರ ತನಿಖೆಗಳನ್ನು ಮಾಡಿದ್ದಾರೆ ಎನ್ನುವ ಅಂಶಗಳ ಆಧಾರದ ಮೇಲೆ ಮೊಕದ್ದಮೆ ಹೂಡಲಾಗಿದೆ” ಎಂದು ವಾದಿಸಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ.

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು.

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ- ಹೇಮಾ ಮಾಲಿನಿ

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...