HomeUncategorizedಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದವು

- Advertisement -
- Advertisement -

ಸುಶಾಂತ್ ಸಾವಿನ ಪ್ರಕರಣದಲ್ಲಿ ಬೇಜವಾಬ್ದಾರಿಯುತ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್‌ ಇಂದು ನೋಟಿಸ್ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು.

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಟೈಮ್ಸ್‌ ನೌ ನವಿಕಾ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ನೋಡಿಸ್‌ ನೀಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಈ ಪ್ರಕರಣವನ್ನು ನ್ಯಾಯಮೂರ್ತಿ ರಾಜೀವ್ ಶಖ್ದರ್ ವಿಚಾರಣೆ ನಡೆಸುತ್ತಿದ್ದಾರೆ. ಬಾಲಿವುಡ್ ಪರವಾಗಿ ಹಾಜರಾದ ವಕೀಲ ರಾಜೀವ್ ನಾಯರ್, “ಮಾನಹಾನಿ, ಗೌಪ್ಯತೆಯ ಹಕ್ಕಿನ ಉಲ್ಲಂಘನೆ, ವೈಯಕ್ತಿಕ ಸುರಕ್ಷತೆಗೆ ಧಕ್ಕೆ ತರುವುದು, ಹಾನಿಕಾರಕ ಸುಳ್ಳು, ಪ್ರೋಗ್ರಾಂ ಕೋಡ್ ಉಲ್ಲಂಘನೆ, ನ್ಯಾಯಯುತ ವಿಚಾರಣೆಯ ನಿರೀಕ್ಷೆಗಳಿಗೆ ವಿರುದ್ಧವಾದ ಸಮಾನಾಂತರ ತನಿಖೆಗಳನ್ನು ಮಾಡಿದ್ದಾರೆ ಎನ್ನುವ ಅಂಶಗಳ ಆಧಾರದ ಮೇಲೆ ಮೊಕದ್ದಮೆ ಹೂಡಲಾಗಿದೆ” ಎಂದು ವಾದಿಸಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ.

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು.

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ- ಹೇಮಾ ಮಾಲಿನಿ

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...