HomeUncategorizedಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದವು

- Advertisement -
- Advertisement -

ಸುಶಾಂತ್ ಸಾವಿನ ಪ್ರಕರಣದಲ್ಲಿ ಬೇಜವಾಬ್ದಾರಿಯುತ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್‌ ಇಂದು ನೋಟಿಸ್ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು.

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಟೈಮ್ಸ್‌ ನೌ ನವಿಕಾ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ನೋಡಿಸ್‌ ನೀಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಈ ಪ್ರಕರಣವನ್ನು ನ್ಯಾಯಮೂರ್ತಿ ರಾಜೀವ್ ಶಖ್ದರ್ ವಿಚಾರಣೆ ನಡೆಸುತ್ತಿದ್ದಾರೆ. ಬಾಲಿವುಡ್ ಪರವಾಗಿ ಹಾಜರಾದ ವಕೀಲ ರಾಜೀವ್ ನಾಯರ್, “ಮಾನಹಾನಿ, ಗೌಪ್ಯತೆಯ ಹಕ್ಕಿನ ಉಲ್ಲಂಘನೆ, ವೈಯಕ್ತಿಕ ಸುರಕ್ಷತೆಗೆ ಧಕ್ಕೆ ತರುವುದು, ಹಾನಿಕಾರಕ ಸುಳ್ಳು, ಪ್ರೋಗ್ರಾಂ ಕೋಡ್ ಉಲ್ಲಂಘನೆ, ನ್ಯಾಯಯುತ ವಿಚಾರಣೆಯ ನಿರೀಕ್ಷೆಗಳಿಗೆ ವಿರುದ್ಧವಾದ ಸಮಾನಾಂತರ ತನಿಖೆಗಳನ್ನು ಮಾಡಿದ್ದಾರೆ ಎನ್ನುವ ಅಂಶಗಳ ಆಧಾರದ ಮೇಲೆ ಮೊಕದ್ದಮೆ ಹೂಡಲಾಗಿದೆ” ಎಂದು ವಾದಿಸಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ.

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು.

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ- ಹೇಮಾ ಮಾಲಿನಿ

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...