Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು ಎನ್‌ಜಿಒ ಮನವಿ ಮಾಡಿದೆ. 

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವು ಪ್ರಕರಣ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಕೋರಿ In Pursuit of Justice ಎಂಬ ಎನ್‌ಜಿಒ ಬಾಂಬೆ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ಹಿನ್ನೆಲೆ ಕೇಂದ್ರಕ್ಕೆ ಬಾಂಬೆ ‌ಹೈಕೋರ್ಟ್ ನೋಟಿಸ್ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸುಶಾಂತ್ ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ ಮೂರನೇ ಅರ್ಜಿ ಇದಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ನೇತೃತ್ವದ ಪೀಠವು ಅಕ್ಟೋಬರ್ 8 ರಂದು ಎಲ್ಲಾ ಮೂರು ಮನವಿಗಳನ್ನು ವಿಚಾರಣೆಗಾಗಿ ಪಟ್ಟಿ ಮಾಡಿದೆ. ಮೊದಲ ಮನವಿಯನ್ನು ಪುಣೆ ಮೂಲದ ಚಲನಚಿತ್ರ ನಿರ್ಮಾಪಕ ನಿಲೇಶ್ ನವಲಖಾ ಮತ್ತು ಇನ್ನಿಬ್ಬರು ಸಲ್ಲಿಸಿದ್ದರೆ, ಎರಡನೆಯದನ್ನು ರಾಜ್ಯದ ಎಂಟು ಮಾಜಿ ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದಾರೆ. ಮೂರನೇ ಅರ್ಜಿಯನ್ನು In Pursuit of Justice ಎನ್‌ಜಿಒ ಸಲ್ಲಿಸಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು In Pursuit of Justice ಎನ್‌ಜಿಒ ಅರ್ಜಿಯಲ್ಲಿ ಮನವಿ ಮಾಡಿದೆ.

ಮಾಧ್ಯಮಗಳು ಈಗಾಗಲೇ ಮೃತರ ವೈಯಕ್ತಿಕ ಸಂದೇಶಗಳು ಮತ್ತು ಆರೋಪಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಹೇಳಿಕೆಗಳನ್ನು ಪ್ರಕಟಿಸಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಪ್ರಕರಣ, ವಿಚಾರಣೆ ಹಂತದಲ್ಲಿರುವಾಗಲೇ ಆರೋಪಿಗಳನ್ನು ಕೊಲೆಗಾರ, ಗೋಲ್ಡ್ ಡಿಗ್ಗರ್‌ ‍ ಎಂಬಂತ ಹೆಸರುಗಳಿಂದ ಕರೆಯುತ್ತಿವೆ.  ಇಂತಹ ವರದಿಗಳು ರಜಪೂತ್ ಸಾವಿನ ತನಿಖೆಯ ಮೇಲೆ ಪ್ರಭಾವ ಬೀರಬಹುದು ಮತ್ತು ತನಿಖೆ ಪೂರ್ವಾಗ್ರಹ ಪೀಡಿತವಾಗಬಹುದು ಎಂದು ಎನ್‌ಜಿಒ ತನ್ನ ಮನವಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಪ್ರಕರಣ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಆದರೆ ಮೃತರ ತಂದೆ ಆತ್ಮಹತ್ಯೆಗೆ ಪ್ರಚೋದನೆ, ಮೋಸ, ಕಳ್ಳತನ ಮುಂತಾದ ಆರೋಪಗಳನ್ನು ಮಾಡಿ ದೂರು ದಾಖಲಿಸಿದ್ದು, ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ತನಿಖೆ ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.

ಸದ್ಯ ನಟನ ಸಾವಿನ ತನಿಖೆಯಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣವೂ ಸೇರಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆಕೆಗೆ ಜಾಮೀನು ನಿರಾಕರಿಸಲಾಗಿದೆ.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...