Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು ಎನ್‌ಜಿಒ ಮನವಿ ಮಾಡಿದೆ. 

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವು ಪ್ರಕರಣ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಕೋರಿ In Pursuit of Justice ಎಂಬ ಎನ್‌ಜಿಒ ಬಾಂಬೆ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ಹಿನ್ನೆಲೆ ಕೇಂದ್ರಕ್ಕೆ ಬಾಂಬೆ ‌ಹೈಕೋರ್ಟ್ ನೋಟಿಸ್ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸುಶಾಂತ್ ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ ಮೂರನೇ ಅರ್ಜಿ ಇದಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ನೇತೃತ್ವದ ಪೀಠವು ಅಕ್ಟೋಬರ್ 8 ರಂದು ಎಲ್ಲಾ ಮೂರು ಮನವಿಗಳನ್ನು ವಿಚಾರಣೆಗಾಗಿ ಪಟ್ಟಿ ಮಾಡಿದೆ. ಮೊದಲ ಮನವಿಯನ್ನು ಪುಣೆ ಮೂಲದ ಚಲನಚಿತ್ರ ನಿರ್ಮಾಪಕ ನಿಲೇಶ್ ನವಲಖಾ ಮತ್ತು ಇನ್ನಿಬ್ಬರು ಸಲ್ಲಿಸಿದ್ದರೆ, ಎರಡನೆಯದನ್ನು ರಾಜ್ಯದ ಎಂಟು ಮಾಜಿ ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದಾರೆ. ಮೂರನೇ ಅರ್ಜಿಯನ್ನು In Pursuit of Justice ಎನ್‌ಜಿಒ ಸಲ್ಲಿಸಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು In Pursuit of Justice ಎನ್‌ಜಿಒ ಅರ್ಜಿಯಲ್ಲಿ ಮನವಿ ಮಾಡಿದೆ.

ಮಾಧ್ಯಮಗಳು ಈಗಾಗಲೇ ಮೃತರ ವೈಯಕ್ತಿಕ ಸಂದೇಶಗಳು ಮತ್ತು ಆರೋಪಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಹೇಳಿಕೆಗಳನ್ನು ಪ್ರಕಟಿಸಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಪ್ರಕರಣ, ವಿಚಾರಣೆ ಹಂತದಲ್ಲಿರುವಾಗಲೇ ಆರೋಪಿಗಳನ್ನು ಕೊಲೆಗಾರ, ಗೋಲ್ಡ್ ಡಿಗ್ಗರ್‌ ‍ ಎಂಬಂತ ಹೆಸರುಗಳಿಂದ ಕರೆಯುತ್ತಿವೆ.  ಇಂತಹ ವರದಿಗಳು ರಜಪೂತ್ ಸಾವಿನ ತನಿಖೆಯ ಮೇಲೆ ಪ್ರಭಾವ ಬೀರಬಹುದು ಮತ್ತು ತನಿಖೆ ಪೂರ್ವಾಗ್ರಹ ಪೀಡಿತವಾಗಬಹುದು ಎಂದು ಎನ್‌ಜಿಒ ತನ್ನ ಮನವಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಪ್ರಕರಣ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಆದರೆ ಮೃತರ ತಂದೆ ಆತ್ಮಹತ್ಯೆಗೆ ಪ್ರಚೋದನೆ, ಮೋಸ, ಕಳ್ಳತನ ಮುಂತಾದ ಆರೋಪಗಳನ್ನು ಮಾಡಿ ದೂರು ದಾಖಲಿಸಿದ್ದು, ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ತನಿಖೆ ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.

ಸದ್ಯ ನಟನ ಸಾವಿನ ತನಿಖೆಯಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣವೂ ಸೇರಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆಕೆಗೆ ಜಾಮೀನು ನಿರಾಕರಿಸಲಾಗಿದೆ.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...