Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು ಎನ್‌ಜಿಒ ಮನವಿ ಮಾಡಿದೆ. 

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವು ಪ್ರಕರಣ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಕೋರಿ In Pursuit of Justice ಎಂಬ ಎನ್‌ಜಿಒ ಬಾಂಬೆ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ಹಿನ್ನೆಲೆ ಕೇಂದ್ರಕ್ಕೆ ಬಾಂಬೆ ‌ಹೈಕೋರ್ಟ್ ನೋಟಿಸ್ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸುಶಾಂತ್ ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ ಮೂರನೇ ಅರ್ಜಿ ಇದಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ನೇತೃತ್ವದ ಪೀಠವು ಅಕ್ಟೋಬರ್ 8 ರಂದು ಎಲ್ಲಾ ಮೂರು ಮನವಿಗಳನ್ನು ವಿಚಾರಣೆಗಾಗಿ ಪಟ್ಟಿ ಮಾಡಿದೆ. ಮೊದಲ ಮನವಿಯನ್ನು ಪುಣೆ ಮೂಲದ ಚಲನಚಿತ್ರ ನಿರ್ಮಾಪಕ ನಿಲೇಶ್ ನವಲಖಾ ಮತ್ತು ಇನ್ನಿಬ್ಬರು ಸಲ್ಲಿಸಿದ್ದರೆ, ಎರಡನೆಯದನ್ನು ರಾಜ್ಯದ ಎಂಟು ಮಾಜಿ ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದಾರೆ. ಮೂರನೇ ಅರ್ಜಿಯನ್ನು In Pursuit of Justice ಎನ್‌ಜಿಒ ಸಲ್ಲಿಸಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲು In Pursuit of Justice ಎನ್‌ಜಿಒ ಅರ್ಜಿಯಲ್ಲಿ ಮನವಿ ಮಾಡಿದೆ.

ಮಾಧ್ಯಮಗಳು ಈಗಾಗಲೇ ಮೃತರ ವೈಯಕ್ತಿಕ ಸಂದೇಶಗಳು ಮತ್ತು ಆರೋಪಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಹೇಳಿಕೆಗಳನ್ನು ಪ್ರಕಟಿಸಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಪ್ರಕರಣ, ವಿಚಾರಣೆ ಹಂತದಲ್ಲಿರುವಾಗಲೇ ಆರೋಪಿಗಳನ್ನು ಕೊಲೆಗಾರ, ಗೋಲ್ಡ್ ಡಿಗ್ಗರ್‌ ‍ ಎಂಬಂತ ಹೆಸರುಗಳಿಂದ ಕರೆಯುತ್ತಿವೆ.  ಇಂತಹ ವರದಿಗಳು ರಜಪೂತ್ ಸಾವಿನ ತನಿಖೆಯ ಮೇಲೆ ಪ್ರಭಾವ ಬೀರಬಹುದು ಮತ್ತು ತನಿಖೆ ಪೂರ್ವಾಗ್ರಹ ಪೀಡಿತವಾಗಬಹುದು ಎಂದು ಎನ್‌ಜಿಒ ತನ್ನ ಮನವಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಪ್ರಕರಣ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಆದರೆ ಮೃತರ ತಂದೆ ಆತ್ಮಹತ್ಯೆಗೆ ಪ್ರಚೋದನೆ, ಮೋಸ, ಕಳ್ಳತನ ಮುಂತಾದ ಆರೋಪಗಳನ್ನು ಮಾಡಿ ದೂರು ದಾಖಲಿಸಿದ್ದು, ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ತನಿಖೆ ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.

ಸದ್ಯ ನಟನ ಸಾವಿನ ತನಿಖೆಯಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣವೂ ಸೇರಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಆಕೆಗೆ ಜಾಮೀನು ನಿರಾಕರಿಸಲಾಗಿದೆ.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...