Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...