Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...