Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...