Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...