Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...