Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...