Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...