Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಸೇರಿದಂತೆ 33 ಜನರನ್ನು ಹೆಸರಿದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ಸುಮಾರು 12,000 ಕ್ಕೂ ಹೆಚ್ಚು ಪುಟಗಳಿರುವ ಈ ಚಾರ್ಜ್‌ಶೀಟ್ ಡಿಜಿಟಲ್ ಸ್ವರೂಪವು ಸುಮಾರು 50,000 ಪುಟಗಳನ್ನು ಹೊಂದಿದೆ.

ಕಳೆದ ವರ್ಷದ ಜೂನ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಇದರಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಬ್ಬರನ್ನೂ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಚಾರ್ಜ್‌ಶೀಟ್‌ನಲ್ಲಿರುವ 33 ಆರೋಪಿಗಳಲ್ಲಿ ಎಂಟು ಮಂದಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ಸಿಬ್ಬಂದಿಗಳ ನಡುವೆ ನಡೆಯಲಾಗಿದೆ ಎಂದು ಹೇಳಲಾದ ಖಾಸಗಿ ವಾಟ್ಸಾಪ್ ಚಾಟ್‌ಗಳನ್ನು ಜಾರಿ ನಿರ್ದೇಶನಾಲಯ ಹಂಚಿಕೊಂಡ ನಂತರ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇವರೆಲ್ಲರೂ ನಟನಿಗೆ ಮಾದಕ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀರ್ಘ ಆರು ತಿಂಗಳ ತನಿಖೆಯಲ್ಲಿ, ಎನ್‌ಸಿಬಿ ಮಹಾರಾಷ್ಟ್ರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಮುಂಬೈನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಬಾಲಿವುಡ್‌ನೊಳಗೆ ಇದ್ದ ಹಲವು ಮಾದಕ ವಸ್ತು ಜಾಲವನ್ನು ಭೇದಿಸಿದ್ದಾಗಿ ಸಂಸ್ಥೆ ಹೇಳಿಕೊಂಡಿದೆ.

ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಮಾಧ್ಯಮಗಳ

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಫೆಬ್ರವರಿಯಲ್ಲಿ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಎನ್‌ಸಿಬಿ ಬಂಧಿಸಿತ್ತು. ಈ ಹಿಂದೆ ಧರ್ಮ ಪ್ರೊಡಕ್ಷನ್‌ನ ಡಿಜಿಟಲ್ ಆರ್ಮ್‌ನೊಂದಿಗೆ ಸಂಬಂಧ ಹೊಂದಿದ್ದ ಕ್ಷಿತಿಜ್ ರವಿ ಪ್ರಸಾದ್ ಕೂಡ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳು, ಕರೆ ದಾಖಲೆಗಳು, ವಾಟ್ಸಾಪ್ ಚಾಟ್‌ಗಳು, ಸ್ಥಳಗಳ ಟ್ಯಾಗ್‌ಗಳು, ವಿಡಿಯೋ ಮತ್ತು ಧ್ವನಿ ರೆಕಾರ್ಡಿಂಗ್‌ಗಳು ಮತ್ತು ಇತರ ಹಲವಾರು ದಾಖಲೆಗಳನ್ನು ಒಳಗೊಂಡ ಸಾಕ್ಷ್ಯಗಳನ್ನು ದೋಷಾರೋಪಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಸದ್ಯ ಏಜೆನ್ಸಿಯು ಈ ಎಲ್ಲಾ ಹೇಳಿಕೆಗಳು ಮತ್ತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗುತ್ತದೆ.


ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...