Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಸೇರಿದಂತೆ 33 ಜನರನ್ನು ಹೆಸರಿದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ಸುಮಾರು 12,000 ಕ್ಕೂ ಹೆಚ್ಚು ಪುಟಗಳಿರುವ ಈ ಚಾರ್ಜ್‌ಶೀಟ್ ಡಿಜಿಟಲ್ ಸ್ವರೂಪವು ಸುಮಾರು 50,000 ಪುಟಗಳನ್ನು ಹೊಂದಿದೆ.

ಕಳೆದ ವರ್ಷದ ಜೂನ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಇದರಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಬ್ಬರನ್ನೂ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಚಾರ್ಜ್‌ಶೀಟ್‌ನಲ್ಲಿರುವ 33 ಆರೋಪಿಗಳಲ್ಲಿ ಎಂಟು ಮಂದಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ಸಿಬ್ಬಂದಿಗಳ ನಡುವೆ ನಡೆಯಲಾಗಿದೆ ಎಂದು ಹೇಳಲಾದ ಖಾಸಗಿ ವಾಟ್ಸಾಪ್ ಚಾಟ್‌ಗಳನ್ನು ಜಾರಿ ನಿರ್ದೇಶನಾಲಯ ಹಂಚಿಕೊಂಡ ನಂತರ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇವರೆಲ್ಲರೂ ನಟನಿಗೆ ಮಾದಕ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀರ್ಘ ಆರು ತಿಂಗಳ ತನಿಖೆಯಲ್ಲಿ, ಎನ್‌ಸಿಬಿ ಮಹಾರಾಷ್ಟ್ರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಮುಂಬೈನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಬಾಲಿವುಡ್‌ನೊಳಗೆ ಇದ್ದ ಹಲವು ಮಾದಕ ವಸ್ತು ಜಾಲವನ್ನು ಭೇದಿಸಿದ್ದಾಗಿ ಸಂಸ್ಥೆ ಹೇಳಿಕೊಂಡಿದೆ.

ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಮಾಧ್ಯಮಗಳ

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಫೆಬ್ರವರಿಯಲ್ಲಿ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಎನ್‌ಸಿಬಿ ಬಂಧಿಸಿತ್ತು. ಈ ಹಿಂದೆ ಧರ್ಮ ಪ್ರೊಡಕ್ಷನ್‌ನ ಡಿಜಿಟಲ್ ಆರ್ಮ್‌ನೊಂದಿಗೆ ಸಂಬಂಧ ಹೊಂದಿದ್ದ ಕ್ಷಿತಿಜ್ ರವಿ ಪ್ರಸಾದ್ ಕೂಡ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳು, ಕರೆ ದಾಖಲೆಗಳು, ವಾಟ್ಸಾಪ್ ಚಾಟ್‌ಗಳು, ಸ್ಥಳಗಳ ಟ್ಯಾಗ್‌ಗಳು, ವಿಡಿಯೋ ಮತ್ತು ಧ್ವನಿ ರೆಕಾರ್ಡಿಂಗ್‌ಗಳು ಮತ್ತು ಇತರ ಹಲವಾರು ದಾಖಲೆಗಳನ್ನು ಒಳಗೊಂಡ ಸಾಕ್ಷ್ಯಗಳನ್ನು ದೋಷಾರೋಪಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಸದ್ಯ ಏಜೆನ್ಸಿಯು ಈ ಎಲ್ಲಾ ಹೇಳಿಕೆಗಳು ಮತ್ತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗುತ್ತದೆ.


ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...