Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಸೇರಿದಂತೆ 33 ಜನರನ್ನು ಹೆಸರಿದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ಸುಮಾರು 12,000 ಕ್ಕೂ ಹೆಚ್ಚು ಪುಟಗಳಿರುವ ಈ ಚಾರ್ಜ್‌ಶೀಟ್ ಡಿಜಿಟಲ್ ಸ್ವರೂಪವು ಸುಮಾರು 50,000 ಪುಟಗಳನ್ನು ಹೊಂದಿದೆ.

ಕಳೆದ ವರ್ಷದ ಜೂನ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಇದರಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಬ್ಬರನ್ನೂ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಚಾರ್ಜ್‌ಶೀಟ್‌ನಲ್ಲಿರುವ 33 ಆರೋಪಿಗಳಲ್ಲಿ ಎಂಟು ಮಂದಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ಸಿಬ್ಬಂದಿಗಳ ನಡುವೆ ನಡೆಯಲಾಗಿದೆ ಎಂದು ಹೇಳಲಾದ ಖಾಸಗಿ ವಾಟ್ಸಾಪ್ ಚಾಟ್‌ಗಳನ್ನು ಜಾರಿ ನಿರ್ದೇಶನಾಲಯ ಹಂಚಿಕೊಂಡ ನಂತರ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇವರೆಲ್ಲರೂ ನಟನಿಗೆ ಮಾದಕ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀರ್ಘ ಆರು ತಿಂಗಳ ತನಿಖೆಯಲ್ಲಿ, ಎನ್‌ಸಿಬಿ ಮಹಾರಾಷ್ಟ್ರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಮುಂಬೈನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಬಾಲಿವುಡ್‌ನೊಳಗೆ ಇದ್ದ ಹಲವು ಮಾದಕ ವಸ್ತು ಜಾಲವನ್ನು ಭೇದಿಸಿದ್ದಾಗಿ ಸಂಸ್ಥೆ ಹೇಳಿಕೊಂಡಿದೆ.

ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಮಾಧ್ಯಮಗಳ

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಫೆಬ್ರವರಿಯಲ್ಲಿ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಎನ್‌ಸಿಬಿ ಬಂಧಿಸಿತ್ತು. ಈ ಹಿಂದೆ ಧರ್ಮ ಪ್ರೊಡಕ್ಷನ್‌ನ ಡಿಜಿಟಲ್ ಆರ್ಮ್‌ನೊಂದಿಗೆ ಸಂಬಂಧ ಹೊಂದಿದ್ದ ಕ್ಷಿತಿಜ್ ರವಿ ಪ್ರಸಾದ್ ಕೂಡ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳು, ಕರೆ ದಾಖಲೆಗಳು, ವಾಟ್ಸಾಪ್ ಚಾಟ್‌ಗಳು, ಸ್ಥಳಗಳ ಟ್ಯಾಗ್‌ಗಳು, ವಿಡಿಯೋ ಮತ್ತು ಧ್ವನಿ ರೆಕಾರ್ಡಿಂಗ್‌ಗಳು ಮತ್ತು ಇತರ ಹಲವಾರು ದಾಖಲೆಗಳನ್ನು ಒಳಗೊಂಡ ಸಾಕ್ಷ್ಯಗಳನ್ನು ದೋಷಾರೋಪಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಸದ್ಯ ಏಜೆನ್ಸಿಯು ಈ ಎಲ್ಲಾ ಹೇಳಿಕೆಗಳು ಮತ್ತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗುತ್ತದೆ.


ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....