Homeಮುಖಪುಟಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತಂತೆ ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿದೆ. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿದೆ.

ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ನೆನಪಿಗಾಗಿ 1 ಲಕ್ಷ ಗಿಡ ನೆಟ್ಟಅಭಿಮಾನಿಗಳು!

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಮ್ಮದು ವೃತ್ತಿಪರ ತನಿಖೆ ಎಂದು ನಾವು ಈ ಹಿಂದೆಯೇ ಸಮರ್ಥಿಸಿಕೊಂಡಿದ್ದೇವೆ. ಮರಣೋತ್ತರ ಪರೀಕ್ಷೆಯನ್ನು ವೃತ್ತಿಪರವಾಗಿ ನಡೆಸಲಾಗಿದೆ. ನಮ್ಮ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದಾಗ, ಅದರಲ್ಲಿ, ನ್ಯಾಯಾಲಯವು ಯಾವುದೇ ದೋಷವನ್ನು ಕಂಡುಕೊಂಡಿಲ್ಲ” ಎಂದು ಪರಂಬೀರ್ ಸಿಂಗ್ ಹೇಳಿದರು.

ಸಿಬಿಐ 57 ದಿನಗಳಲ್ಲಿ 20 ಜನರನ್ನು ಪ್ರಶ್ನಿಸಿದ್ದಾರೆ. ತಾನು ವಶಪಡಿಸಿಕೊಂಡ ಲ್ಯಾಪ್‌ಟಾಪ್‌ಗಳು, ಹಾರ್ಡ್‌ಡ್ರೈವ್‌ಗಳು, ಕ್ಯಾಮರಗಳು ಮತ್ತು ಮೊಬೈಲ್‌ಗಳನ್ನು ವಿಧಿವಿಜ್ಞಾನವಾಗಿ ಪರಿಶೀಲಿಸಲಾಗಿದೆ. ಈ ತನಿಖೆಯಲ್ಲಿ ಕೊಲೆ ಎನ್ನಲು ಆಧಾರವಾದ ಯಾವ ಸಾಕ್ಷ್ಯಗಳು ಸಿಕ್ಕಿಲ್ಲ. ಈಗಲೂ ಮುಕ್ತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...