Homeಮುಖಪುಟನಟ ಸುಶಾಂತ್ ಸಿಂಗ್ ಜೀವನಾಧಾರಿತ ಚಿತ್ರಕ್ಕೆ ತಡೆ ಹೇರಲು ದೆಹಲಿ ಹೈಕೋರ್ಟ್ ನಿರಾಕರಣೆ

ನಟ ಸುಶಾಂತ್ ಸಿಂಗ್ ಜೀವನಾಧಾರಿತ ಚಿತ್ರಕ್ಕೆ ತಡೆ ಹೇರಲು ದೆಹಲಿ ಹೈಕೋರ್ಟ್ ನಿರಾಕರಣೆ

- Advertisement -
- Advertisement -

ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನವನ್ನು ಆಧರಿಸಿ ತಯಾರಿಸಿರುವ ‘ನ್ಯಾಯ್: ದಿ ಜಸ್ಟೀಸ್’ ಚಿತ್ರ ನಾಳೆ (ಶುಕ್ರವಾರ) ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಈ ಚಿತ್ರವನ್ನು ಕುಟುಂಬದ ಒಪ್ಪಿಗೆಯಿಲ್ಲದೆ ಚಿತ್ರೀಕರಿಸಲಾಗಿದೆ ಮತ್ತು ಮಗನ ಆತ್ಮಹತ್ಯೆಯಲ್ಲಿ ಪಾತ್ರವಿದೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಗಳನ್ನು ಚಿತ್ರದಲ್ಲಿ ವಿಶ್ವಾಸಾರ್ಹರು ಎಂದು ತೋರಿಸಲಾಗಿದೆ ಎಂದು ಅರ್ಜಿ ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಸಂಜೀವ್ ನರುಲಾ ನೇತೃತ್ವದ ನ್ಯಾಯಪೀಠವು ಕೃಷ್ಣ ಕಿಶೋರ್ ಸಿಂಗ್ ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್ ವಿವಿಧ ಚಲನಚಿತ್ರಗಳ ನಿರ್ಮಾಪಕರಿಗೆ, ನಟ ಸುಶಾಂತ್ ರಜಪೂತ್ ಅವರ ತಂದೆಯ ಮನವಿಗೆ ಸ್ಪಂದಿಸಲು ತಿಳಿಸಿತ್ತು. ತಮ್ಮ ಮಗನ ಹೆಸರು ಅಥವಾ ಹೋಲಿಕೆಯನ್ನು ಬೆಳ್ಳಿ ಪರದೆಯಲ್ಲಿ ಬಳಸದಂತೆ ತಡೆಯಲು ಕೃಷ್ಣ ಕಿಶೋರ್ ಸಿಂಗ್ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಹೈದರಾಬಾದ್:‌ 3 ವರ್ಷದ ಮಗುವಿಗೆ ಮನಸೋ ಇಚ್ಚೆ ಥಳಿಸಿದ ಪೋಷಕರು- ಮೃತಪಟ್ಟ ಮಗು

‘ನ್ಯಾಯ್‌: ದಿ ಜಸ್ಟೀಸ್’ ಚಿತ್ರದ ಜೊತೆಗೆ, ಸುಶಾಂತ್ ರಜಪೂತ್ ಅವರ ಜೀವನದ ಸುತ್ತ ಸುತ್ತುವ, ಸೂಸೈಡ್ ಆರ್ ಮರ್ಡರ್: ಎ ಸ್ಟಾರ್ ವಾಸ್ ಲಾಸ್ಟ್’, ‘ಶಶಾಂಕ್’ ಮತ್ತು ಇನ್ನೂ ಹೆಸರಿಡದ ಹಲವು ಚಿತ್ರಗಳು ತೆರೆಗೆ ಬರಲು ಸಿದ್ಧವಾಗುತ್ತಿವೆ.

“ಚಲನಚಿತ್ರ ನಿರ್ಮಾಪಕರು ಪರಿಸ್ಥಿತಿಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನಾಟಕಗಳು, ಚಲನಚಿತ್ರಗಳು, ವೆಬ್-ಸರಣಿಗಳು, ಪುಸ್ತಕಗಳು, ಸಂದರ್ಶನಗಳು ಅಥವಾ ಇತರ ವಸ್ತುಗಳನ್ನು ಪ್ರಕಟಿಸಲಾಗುತ್ತಿದೆ. ಇವುಗಳಿಂದ ತಮ್ಮ ಮಗನ ಪ್ರತಿಷ್ಠೆ ಮತ್ತು ಕುಟುಂಬಕ್ಕೆ ಧಕ್ಕೆ ತರುತ್ತದೆ” ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಇವುಗಳಿಂದ ಪ್ರತಿಷ್ಠೆ ಕಳೆದುಕೊಳ್ಳುವುದು, ಮಾನಸಿಕ ಆಘಾತ ಮತ್ತು ಕಿರುಕುಳ ಉಂಟಾಗುವುದರಿಂದ 2 ಕೋಟಿ ರೂಪಾಯಿ ನಷ್ಟವನ್ನು ಅರ್ಜಿಯಲ್ಲಿ ಕೋರಲಾಗಿದೆ.

ಬಾಲಿವುಡ್‌ನ ಜನಪ್ರಿಯ ನಟ ಸುಶಾಂತ್ ಸಿಂಗ್ ರಜಪೂತ್ (34) ತಮ್ಮ ಮುಂಬೈ ಅಪಾರ್ಟ್‌ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇವರ ಸಾವು ಹಲವು ವಿವಾದಗಳಿಗೆ ಕಾರಣವಾಗಿತ್ತು. ಬಿಹಾರ ಮತ್ತು ಮುಂಬೈ ಪೊಲೀಸರ ನಡುವೆ ಆರೋಪ – ಪ್ರತ್ಯಾರೋಪಗಳಿಗೆ ಕಾರಣವಾಗಿ, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನಿಖಾ ಏಜೆನ್ಸಿಗಳು ಪ್ರಕರಣದ ತನಿಖೆಯಲ್ಲಿ ಸಕ್ರಿಯವಾಗಿವೆ.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...