Homeಮುಖಪುಟನಟ ಸುಶಾಂತ್ ಸಿಂಗ್ ಜೀವನಾಧಾರಿತ ಚಿತ್ರಕ್ಕೆ ತಡೆ ಹೇರಲು ದೆಹಲಿ ಹೈಕೋರ್ಟ್ ನಿರಾಕರಣೆ

ನಟ ಸುಶಾಂತ್ ಸಿಂಗ್ ಜೀವನಾಧಾರಿತ ಚಿತ್ರಕ್ಕೆ ತಡೆ ಹೇರಲು ದೆಹಲಿ ಹೈಕೋರ್ಟ್ ನಿರಾಕರಣೆ

- Advertisement -
- Advertisement -

ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನವನ್ನು ಆಧರಿಸಿ ತಯಾರಿಸಿರುವ ‘ನ್ಯಾಯ್: ದಿ ಜಸ್ಟೀಸ್’ ಚಿತ್ರ ನಾಳೆ (ಶುಕ್ರವಾರ) ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಈ ಚಿತ್ರವನ್ನು ಕುಟುಂಬದ ಒಪ್ಪಿಗೆಯಿಲ್ಲದೆ ಚಿತ್ರೀಕರಿಸಲಾಗಿದೆ ಮತ್ತು ಮಗನ ಆತ್ಮಹತ್ಯೆಯಲ್ಲಿ ಪಾತ್ರವಿದೆ ಎಂದು ಆರೋಪಿಸಲ್ಪಟ್ಟ ವ್ಯಕ್ತಿಗಳನ್ನು ಚಿತ್ರದಲ್ಲಿ ವಿಶ್ವಾಸಾರ್ಹರು ಎಂದು ತೋರಿಸಲಾಗಿದೆ ಎಂದು ಅರ್ಜಿ ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಸಂಜೀವ್ ನರುಲಾ ನೇತೃತ್ವದ ನ್ಯಾಯಪೀಠವು ಕೃಷ್ಣ ಕಿಶೋರ್ ಸಿಂಗ್ ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್ ವಿವಿಧ ಚಲನಚಿತ್ರಗಳ ನಿರ್ಮಾಪಕರಿಗೆ, ನಟ ಸುಶಾಂತ್ ರಜಪೂತ್ ಅವರ ತಂದೆಯ ಮನವಿಗೆ ಸ್ಪಂದಿಸಲು ತಿಳಿಸಿತ್ತು. ತಮ್ಮ ಮಗನ ಹೆಸರು ಅಥವಾ ಹೋಲಿಕೆಯನ್ನು ಬೆಳ್ಳಿ ಪರದೆಯಲ್ಲಿ ಬಳಸದಂತೆ ತಡೆಯಲು ಕೃಷ್ಣ ಕಿಶೋರ್ ಸಿಂಗ್ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಹೈದರಾಬಾದ್:‌ 3 ವರ್ಷದ ಮಗುವಿಗೆ ಮನಸೋ ಇಚ್ಚೆ ಥಳಿಸಿದ ಪೋಷಕರು- ಮೃತಪಟ್ಟ ಮಗು

‘ನ್ಯಾಯ್‌: ದಿ ಜಸ್ಟೀಸ್’ ಚಿತ್ರದ ಜೊತೆಗೆ, ಸುಶಾಂತ್ ರಜಪೂತ್ ಅವರ ಜೀವನದ ಸುತ್ತ ಸುತ್ತುವ, ಸೂಸೈಡ್ ಆರ್ ಮರ್ಡರ್: ಎ ಸ್ಟಾರ್ ವಾಸ್ ಲಾಸ್ಟ್’, ‘ಶಶಾಂಕ್’ ಮತ್ತು ಇನ್ನೂ ಹೆಸರಿಡದ ಹಲವು ಚಿತ್ರಗಳು ತೆರೆಗೆ ಬರಲು ಸಿದ್ಧವಾಗುತ್ತಿವೆ.

“ಚಲನಚಿತ್ರ ನಿರ್ಮಾಪಕರು ಪರಿಸ್ಥಿತಿಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನಾಟಕಗಳು, ಚಲನಚಿತ್ರಗಳು, ವೆಬ್-ಸರಣಿಗಳು, ಪುಸ್ತಕಗಳು, ಸಂದರ್ಶನಗಳು ಅಥವಾ ಇತರ ವಸ್ತುಗಳನ್ನು ಪ್ರಕಟಿಸಲಾಗುತ್ತಿದೆ. ಇವುಗಳಿಂದ ತಮ್ಮ ಮಗನ ಪ್ರತಿಷ್ಠೆ ಮತ್ತು ಕುಟುಂಬಕ್ಕೆ ಧಕ್ಕೆ ತರುತ್ತದೆ” ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಇವುಗಳಿಂದ ಪ್ರತಿಷ್ಠೆ ಕಳೆದುಕೊಳ್ಳುವುದು, ಮಾನಸಿಕ ಆಘಾತ ಮತ್ತು ಕಿರುಕುಳ ಉಂಟಾಗುವುದರಿಂದ 2 ಕೋಟಿ ರೂಪಾಯಿ ನಷ್ಟವನ್ನು ಅರ್ಜಿಯಲ್ಲಿ ಕೋರಲಾಗಿದೆ.

ಬಾಲಿವುಡ್‌ನ ಜನಪ್ರಿಯ ನಟ ಸುಶಾಂತ್ ಸಿಂಗ್ ರಜಪೂತ್ (34) ತಮ್ಮ ಮುಂಬೈ ಅಪಾರ್ಟ್‌ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇವರ ಸಾವು ಹಲವು ವಿವಾದಗಳಿಗೆ ಕಾರಣವಾಗಿತ್ತು. ಬಿಹಾರ ಮತ್ತು ಮುಂಬೈ ಪೊಲೀಸರ ನಡುವೆ ಆರೋಪ – ಪ್ರತ್ಯಾರೋಪಗಳಿಗೆ ಕಾರಣವಾಗಿ, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನಿಖಾ ಏಜೆನ್ಸಿಗಳು ಪ್ರಕರಣದ ತನಿಖೆಯಲ್ಲಿ ಸಕ್ರಿಯವಾಗಿವೆ.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...