Homeಮುಖಪುಟಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳೆಯ ಸಂದೀಪ್ ಸಿಂಗ್, ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಮಾನನಷ್ಟ ಆರೋಪದ ಮೇಲೆ ಲೀಗಲ್ ನೋಟಿಸ್ ಕಳುಹಿಸಿದ್ದು, 200 ಕೋಟಿ ರೂ. ಪರಿಹಾರ ಕೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಪ್ರಕಟಿಸಿದ ಸಂದೀಪ್ ಸಿಂಗ್, “ಸುದ್ದಿ ಚಾನೆಲ್, ಕ್ರಿಮಿನಲ್ ಉದ್ದೇಶ ಮತ್ತು ಸುಲಿಗೆ ಮಾಡುವ ಉದ್ದೇಶದಿಂದ ಹಲವಾರು ಸಂದೇಶಗಳನ್ನು ತನಗೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

“ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕರನ್ನು ಪ್ರಮುಖ ಸಂಚುಕೋರ ಮತ್ತು ಕೊಲೆಗಾರ” ಎಂದು ಸಂದೀಪ್ ಸಿಂಗ್ ನೀಡಿರುವ ಕಾನೂನು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

View this post on Instagram

It's Payback time @republicworld #Defamation #EnoughIsEnough

A post shared by Sandip Ssingh (@officialsandipssingh) on

“ನ್ಯೂಸ್ ಚಾನೆಲ್‌ನ ಅಧಿಕಾರಿಯೊಬ್ಬರು ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಚಾನೆಲ್‌ಗೆ ಆರ್ಥಿಕವಾಗಿ ಲಾಭವಾಗಲು ಅವರು ಒಪ್ಪದಿದ್ದರೆ, ನಮ್ಮ ವಿರುದ್ಧ ಸುದ್ದಿ ಪ್ರಸಾರವಾಗಲಿದೆ ಎಂದು ಬೆದರಿಕೆ ಹಾಕಿದ್ದರು. ಈ ಆರೋಪವು ನಿಜ ಎಂಬುದು ಎಂದು ಸಾಬೀತಾಗಿದೆ. ಏಕೆಂದರೆ ನನ್ನ ವಿರುದ್ಧ ಈ ಚಾನೆಲ್ ಅಪಪ್ರಚಾರದ ವರದಿಗಳನ್ನು ಪ್ರಸಾರ ಮಾಡುತ್ತಲೇ ಇದೆ” ಎಂದು ಸಂದೀಪ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನೋಟಿಸ್‌ನಲ್ಲಿ ಮತ್ತೊಂದು ಪ್ರಮುಖ ವಿಷಯವನ್ನು ಉಲ್ಲೇಖಿಸಿ, “ಸುಶಾಂತ್ ಮೃತ ದೇಹವನ್ನು ಹೊತ್ತ ಆಂಬುಲೆನ್ಸ್‌ ಕೂಪರ್ ಆಸ್ಪತ್ರೆಗೆ ಹೋಗಲಿ ಎಂದು ಅವರ ಗೆಳೆಯ ಸಂದೀಪ್ ಸಿಂಗ್ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಮಾಧ್ಯಮದಲ್ಲಿ ಹರಡಲು ಸಂದೀಪ್ ಸಿಂಗ್ ಅವರ ಪಿಆರ್ ಇದರ ಚಿತ್ರವನ್ನು ಕ್ಲಿಕ್ಕಿಸಿದ್ದರು ಎಂಬುದಾಗಿ ಚಾನೆಲ್‌ನ ಪ್ಯಾನಲಿಸ್ಟ್ ಹೇಳಿದ್ದಾರೆ” ಎಂದು ಆರೋಪಿಸಲಾಗಿದೆ.

“ಈ ಮಾಧ್ಯಮ ತಮ್ಮ ವರದಿಯಲ್ಲಿ, ಸುಶಾಂತ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಯಬಾರದು ಎಂದು ಸಂದೀಪ್ ಸಿಂಗ್ ಹೇಳಿರುವುದಾಗಿ, ಅವರ ವಿರುದ್ಧ #ArrestSandeepSsingh ಅಭಿಯಾನ ಆರಂಭಿಸಿ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಜೊತೆಗೆ ಈ ತನಿಖೆಯಿಂದ ತಪ್ಪಿಸಿಕೊಳ್ಳಲು ಇಂಗ್ಲೆಂಡ್‌ಗೆ ಓಡಿ ಹೋಗುವುದಾಗಿ ಸುಳ್ಳು ಹೇಳಿದ್ದಾರೆ” ಎಂದು ನೋಟಿಸ್‌ನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಸಂದೀಪ್ ಸಿಂಗ್ ಅವರ ವಕೀಲ ರಾಜೇಶ್ ಕುಮಾರ್ ಮೂಲಕ ಕಳುಹಿಸಲಾದ ನೋಟಿಸ್‌ನಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸಂದೀಪ್ ಸಿಂಗ್ ಬಗ್ಗೆ ಎಲ್ಲಾ ದುರುದ್ದೇಶಪೂರಿತ ವೀಡಿಯೋಗಳನ್ನು, ಲೇಖನಗಳನ್ನು ಮತ್ತು ವರದಿಗಳನ್ನು ತೆಗೆದುಹಾಕಲು ಹಾಗೂ ಕ್ಷಮೆಯಾಚಿಸುವಂತೆ ಚಾನೆಲ್‌ಗೆ ನೋಟಿಸ್ ನೀಡಲಾಗಿದೆ. ಮತ್ತು ರಿಪಬ್ಲಿಕ್ ಟಿವಿಯಿಂದ ಪರಿಹಾರವಾಗಿ 200 ಕೋಟಿ ರೂ. ನೀಡಬೇಕು. 15 ದಿನಗಳಲ್ಲಿ ಪ್ರತಿಕ್ರಿಯಿಸದಿದ್ದಲ್ಲಿ, ಮಾನಹಾನಿಗೆ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಸಂದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...