Homeಮುಖಪುಟಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳೆಯ ಸಂದೀಪ್ ಸಿಂಗ್, ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಮಾನನಷ್ಟ ಆರೋಪದ ಮೇಲೆ ಲೀಗಲ್ ನೋಟಿಸ್ ಕಳುಹಿಸಿದ್ದು, 200 ಕೋಟಿ ರೂ. ಪರಿಹಾರ ಕೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಪ್ರಕಟಿಸಿದ ಸಂದೀಪ್ ಸಿಂಗ್, “ಸುದ್ದಿ ಚಾನೆಲ್, ಕ್ರಿಮಿನಲ್ ಉದ್ದೇಶ ಮತ್ತು ಸುಲಿಗೆ ಮಾಡುವ ಉದ್ದೇಶದಿಂದ ಹಲವಾರು ಸಂದೇಶಗಳನ್ನು ತನಗೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

“ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕರನ್ನು ಪ್ರಮುಖ ಸಂಚುಕೋರ ಮತ್ತು ಕೊಲೆಗಾರ” ಎಂದು ಸಂದೀಪ್ ಸಿಂಗ್ ನೀಡಿರುವ ಕಾನೂನು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

View this post on Instagram

It's Payback time @republicworld #Defamation #EnoughIsEnough

A post shared by Sandip Ssingh (@officialsandipssingh) on

“ನ್ಯೂಸ್ ಚಾನೆಲ್‌ನ ಅಧಿಕಾರಿಯೊಬ್ಬರು ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಚಾನೆಲ್‌ಗೆ ಆರ್ಥಿಕವಾಗಿ ಲಾಭವಾಗಲು ಅವರು ಒಪ್ಪದಿದ್ದರೆ, ನಮ್ಮ ವಿರುದ್ಧ ಸುದ್ದಿ ಪ್ರಸಾರವಾಗಲಿದೆ ಎಂದು ಬೆದರಿಕೆ ಹಾಕಿದ್ದರು. ಈ ಆರೋಪವು ನಿಜ ಎಂಬುದು ಎಂದು ಸಾಬೀತಾಗಿದೆ. ಏಕೆಂದರೆ ನನ್ನ ವಿರುದ್ಧ ಈ ಚಾನೆಲ್ ಅಪಪ್ರಚಾರದ ವರದಿಗಳನ್ನು ಪ್ರಸಾರ ಮಾಡುತ್ತಲೇ ಇದೆ” ಎಂದು ಸಂದೀಪ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನೋಟಿಸ್‌ನಲ್ಲಿ ಮತ್ತೊಂದು ಪ್ರಮುಖ ವಿಷಯವನ್ನು ಉಲ್ಲೇಖಿಸಿ, “ಸುಶಾಂತ್ ಮೃತ ದೇಹವನ್ನು ಹೊತ್ತ ಆಂಬುಲೆನ್ಸ್‌ ಕೂಪರ್ ಆಸ್ಪತ್ರೆಗೆ ಹೋಗಲಿ ಎಂದು ಅವರ ಗೆಳೆಯ ಸಂದೀಪ್ ಸಿಂಗ್ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಮಾಧ್ಯಮದಲ್ಲಿ ಹರಡಲು ಸಂದೀಪ್ ಸಿಂಗ್ ಅವರ ಪಿಆರ್ ಇದರ ಚಿತ್ರವನ್ನು ಕ್ಲಿಕ್ಕಿಸಿದ್ದರು ಎಂಬುದಾಗಿ ಚಾನೆಲ್‌ನ ಪ್ಯಾನಲಿಸ್ಟ್ ಹೇಳಿದ್ದಾರೆ” ಎಂದು ಆರೋಪಿಸಲಾಗಿದೆ.

“ಈ ಮಾಧ್ಯಮ ತಮ್ಮ ವರದಿಯಲ್ಲಿ, ಸುಶಾಂತ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಯಬಾರದು ಎಂದು ಸಂದೀಪ್ ಸಿಂಗ್ ಹೇಳಿರುವುದಾಗಿ, ಅವರ ವಿರುದ್ಧ #ArrestSandeepSsingh ಅಭಿಯಾನ ಆರಂಭಿಸಿ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಜೊತೆಗೆ ಈ ತನಿಖೆಯಿಂದ ತಪ್ಪಿಸಿಕೊಳ್ಳಲು ಇಂಗ್ಲೆಂಡ್‌ಗೆ ಓಡಿ ಹೋಗುವುದಾಗಿ ಸುಳ್ಳು ಹೇಳಿದ್ದಾರೆ” ಎಂದು ನೋಟಿಸ್‌ನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಸಂದೀಪ್ ಸಿಂಗ್ ಅವರ ವಕೀಲ ರಾಜೇಶ್ ಕುಮಾರ್ ಮೂಲಕ ಕಳುಹಿಸಲಾದ ನೋಟಿಸ್‌ನಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸಂದೀಪ್ ಸಿಂಗ್ ಬಗ್ಗೆ ಎಲ್ಲಾ ದುರುದ್ದೇಶಪೂರಿತ ವೀಡಿಯೋಗಳನ್ನು, ಲೇಖನಗಳನ್ನು ಮತ್ತು ವರದಿಗಳನ್ನು ತೆಗೆದುಹಾಕಲು ಹಾಗೂ ಕ್ಷಮೆಯಾಚಿಸುವಂತೆ ಚಾನೆಲ್‌ಗೆ ನೋಟಿಸ್ ನೀಡಲಾಗಿದೆ. ಮತ್ತು ರಿಪಬ್ಲಿಕ್ ಟಿವಿಯಿಂದ ಪರಿಹಾರವಾಗಿ 200 ಕೋಟಿ ರೂ. ನೀಡಬೇಕು. 15 ದಿನಗಳಲ್ಲಿ ಪ್ರತಿಕ್ರಿಯಿಸದಿದ್ದಲ್ಲಿ, ಮಾನಹಾನಿಗೆ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಸಂದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...