Homeಮುಖಪುಟಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳೆಯ ಸಂದೀಪ್ ಸಿಂಗ್, ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಮಾನನಷ್ಟ ಆರೋಪದ ಮೇಲೆ ಲೀಗಲ್ ನೋಟಿಸ್ ಕಳುಹಿಸಿದ್ದು, 200 ಕೋಟಿ ರೂ. ಪರಿಹಾರ ಕೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಪ್ರಕಟಿಸಿದ ಸಂದೀಪ್ ಸಿಂಗ್, “ಸುದ್ದಿ ಚಾನೆಲ್, ಕ್ರಿಮಿನಲ್ ಉದ್ದೇಶ ಮತ್ತು ಸುಲಿಗೆ ಮಾಡುವ ಉದ್ದೇಶದಿಂದ ಹಲವಾರು ಸಂದೇಶಗಳನ್ನು ತನಗೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

“ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕರನ್ನು ಪ್ರಮುಖ ಸಂಚುಕೋರ ಮತ್ತು ಕೊಲೆಗಾರ” ಎಂದು ಸಂದೀಪ್ ಸಿಂಗ್ ನೀಡಿರುವ ಕಾನೂನು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

View this post on Instagram

It's Payback time @republicworld #Defamation #EnoughIsEnough

A post shared by Sandip Ssingh (@officialsandipssingh) on

“ನ್ಯೂಸ್ ಚಾನೆಲ್‌ನ ಅಧಿಕಾರಿಯೊಬ್ಬರು ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಚಾನೆಲ್‌ಗೆ ಆರ್ಥಿಕವಾಗಿ ಲಾಭವಾಗಲು ಅವರು ಒಪ್ಪದಿದ್ದರೆ, ನಮ್ಮ ವಿರುದ್ಧ ಸುದ್ದಿ ಪ್ರಸಾರವಾಗಲಿದೆ ಎಂದು ಬೆದರಿಕೆ ಹಾಕಿದ್ದರು. ಈ ಆರೋಪವು ನಿಜ ಎಂಬುದು ಎಂದು ಸಾಬೀತಾಗಿದೆ. ಏಕೆಂದರೆ ನನ್ನ ವಿರುದ್ಧ ಈ ಚಾನೆಲ್ ಅಪಪ್ರಚಾರದ ವರದಿಗಳನ್ನು ಪ್ರಸಾರ ಮಾಡುತ್ತಲೇ ಇದೆ” ಎಂದು ಸಂದೀಪ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನೋಟಿಸ್‌ನಲ್ಲಿ ಮತ್ತೊಂದು ಪ್ರಮುಖ ವಿಷಯವನ್ನು ಉಲ್ಲೇಖಿಸಿ, “ಸುಶಾಂತ್ ಮೃತ ದೇಹವನ್ನು ಹೊತ್ತ ಆಂಬುಲೆನ್ಸ್‌ ಕೂಪರ್ ಆಸ್ಪತ್ರೆಗೆ ಹೋಗಲಿ ಎಂದು ಅವರ ಗೆಳೆಯ ಸಂದೀಪ್ ಸಿಂಗ್ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಮಾಧ್ಯಮದಲ್ಲಿ ಹರಡಲು ಸಂದೀಪ್ ಸಿಂಗ್ ಅವರ ಪಿಆರ್ ಇದರ ಚಿತ್ರವನ್ನು ಕ್ಲಿಕ್ಕಿಸಿದ್ದರು ಎಂಬುದಾಗಿ ಚಾನೆಲ್‌ನ ಪ್ಯಾನಲಿಸ್ಟ್ ಹೇಳಿದ್ದಾರೆ” ಎಂದು ಆರೋಪಿಸಲಾಗಿದೆ.

“ಈ ಮಾಧ್ಯಮ ತಮ್ಮ ವರದಿಯಲ್ಲಿ, ಸುಶಾಂತ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಯಬಾರದು ಎಂದು ಸಂದೀಪ್ ಸಿಂಗ್ ಹೇಳಿರುವುದಾಗಿ, ಅವರ ವಿರುದ್ಧ #ArrestSandeepSsingh ಅಭಿಯಾನ ಆರಂಭಿಸಿ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಜೊತೆಗೆ ಈ ತನಿಖೆಯಿಂದ ತಪ್ಪಿಸಿಕೊಳ್ಳಲು ಇಂಗ್ಲೆಂಡ್‌ಗೆ ಓಡಿ ಹೋಗುವುದಾಗಿ ಸುಳ್ಳು ಹೇಳಿದ್ದಾರೆ” ಎಂದು ನೋಟಿಸ್‌ನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಸಂದೀಪ್ ಸಿಂಗ್ ಅವರ ವಕೀಲ ರಾಜೇಶ್ ಕುಮಾರ್ ಮೂಲಕ ಕಳುಹಿಸಲಾದ ನೋಟಿಸ್‌ನಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಚಾನೆಲ್‌ನ ಕ್ರಮವು ಮಾನಹಾನಿಗೆ ಸಂಬಂಧಿಸಿದ್ದಾಗಿದ್ದು, ಇದು ಐಪಿಸಿ ಸೆಕ್ಷನ್ 500 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸಂದೀಪ್ ಸಿಂಗ್ ಬಗ್ಗೆ ಎಲ್ಲಾ ದುರುದ್ದೇಶಪೂರಿತ ವೀಡಿಯೋಗಳನ್ನು, ಲೇಖನಗಳನ್ನು ಮತ್ತು ವರದಿಗಳನ್ನು ತೆಗೆದುಹಾಕಲು ಹಾಗೂ ಕ್ಷಮೆಯಾಚಿಸುವಂತೆ ಚಾನೆಲ್‌ಗೆ ನೋಟಿಸ್ ನೀಡಲಾಗಿದೆ. ಮತ್ತು ರಿಪಬ್ಲಿಕ್ ಟಿವಿಯಿಂದ ಪರಿಹಾರವಾಗಿ 200 ಕೋಟಿ ರೂ. ನೀಡಬೇಕು. 15 ದಿನಗಳಲ್ಲಿ ಪ್ರತಿಕ್ರಿಯಿಸದಿದ್ದಲ್ಲಿ, ಮಾನಹಾನಿಗೆ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಸಂದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...