Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...