Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...