Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...