Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...