Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...