Homeಕರ್ನಾಟಕಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

ಸಲಿಂಗ ವಿವಾಹಕ್ಕೆ ಸಂಸದ ಸುಶೀಲ್ ಮೋದಿ ವಿರೋಧ: ಕ್ಷಮೆಯಾಚಿಸಲು ಅಕ್ಕಯ್‌ ಆಗ್ರಹ

- Advertisement -
- Advertisement -

ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿಯವರು ರಾಜ್ಯಸಭೆಯಲ್ಲಿ ಆಡಿರುವ ಮಾತುಗಳಿಗೆ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್‌ ಕುಮಾರ್‌ ಅವರ ನಿಲುವುಗಳನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿರುವ ಅಕ್ಕಯ್‌, “ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಸಂಬಂಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ಎಲ್‌ಜಿಬಿಟಿಕ್ಯೂಐ ಸಮುದಾಯದಲ್ಲಿ ನೀವು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಶೀಲ್, “ದೇಶದಲ್ಲಿ ಸಲಿಂಗ ವಿವಾಹಗಳ ಸಮಸ್ಯೆಯನ್ನು ನ್ಯಾಯಾಲಯಗಳು ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚೆಯ ಅಗತ್ಯವಿದೆ. ಇಬ್ಬರು ನ್ಯಾಯಾಧೀಶರು ಕುಳಿತು ಇಂತಹ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದು. ದೇಶದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಎಡ-ಉದಾರವಾದಿ ಪ್ರಜಾಪ್ರಭುತ್ವ ಮಂದಿ ಮತ್ತು ಹೋರಾಟಗಾರರು  ಪ್ರಯತ್ನಿಸುತ್ತಿದ್ದಾರೆ. ಸಲಿಂಗ ವಿವಾಹವು ನಮ್ಮ ಸಂಸ್ಕೃತಿ ಮತ್ತು ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ. ಇದನ್ನು ವಿರೋಧಿಸಿ ಅಕ್ಕಯ್‌ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಅಕ್ಕಯ್‌ ಅವರ ಪ್ರತಿಕ್ರಿಯೆ ಏನು?

“ಸಲಿಂಗ ವಿವಾಹಕ್ಕೆ ಸಿಗಬೇಕಾದ ಕಾನೂನು ಮಾನ್ಯತೆಯ ವಿರುದ್ಧ ರಾಜ್ಯಸಭೆಯಲ್ಲಿ ನೀವು ಮಾಡಿದ ಭಾಷಣವನ್ನು ನೋಡಿ ನಾನು ತೀವ್ರವಾಗಿ ವಿಚಲಿತನಾದೆ. ‘ಲೆಸ್ಬಿಯನ್, ಗೇ, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್, ಜೋಗಪ್ಪ ಮಾರ್ಲಾಡಿ + ಆಂದೋಲನ’ದ ಭಾಗವಾಗಿರುವ ಟ್ರಾನ್ಸ್‌ಜೆಂಡರ್ ವ್ಯಕ್ತಿಯಾಗಿರುವ ನಾನು, ‘ಮದುವೆಯಾಗುವ ಹಕ್ಕು ಎಲ್ಲಾ ವ್ಯಕ್ತಿಗಳಿಗೆ ಅನ್ವಯಿಸಬೇಕು. ‘ಪುರುಷರು’ ಮತ್ತು ‘ಮಹಿಳೆಯರಿಗೆ’ ಸೀಮಿತವಾಗಿರಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ ಅಕ್ಕಯ್‌ ಪದ್ಮಶಾಲಿ.

ಮುಂದುವರಿದು, “ನೀವು ‘ಸಲಿಂಗ ವಿವಾಹ’ವನ್ನು ವಿರೋಧಿಸುತ್ತೀರಿ. ನಿಮ್ಮ ಅಭಿಪ್ರಾಯದಲ್ಲಿ ಮದುವೆ ಎಂಬುದು ‘ಶುದ್ಧ’ವಾಗಿರಬೇಕು, ಅಂದರೆ ಜೈವಿಕ ಪುರುಷ ಮತ್ತು ಜೈವಿಕ ಸ್ತ್ರೀಯವರು ಮಾತ್ರ ಮದುವೆಯಾಗಬೇಕು. ಎಲ್‌ಜಿಬಿಟಿಕ್ಯೂಐ ಆಂದೋಲನವು ಇದನ್ನು ಒಪ್ಪುವುದಿಲ್ಲ. ಲಿಂಗವು ಕಾಮನಬಿಲ್ಲಿನಂತೆ ವರ್ಣಮಯವಾದದ್ದು” ಎಂದು ವಿವರಿಸಿದ್ದಾರೆ.

“ನನ್ನ ವೈಯಕ್ತಿಕ ಉದಾಹರಣೆಯನ್ನೇ ಹೇಳುವುದಾದರೆ- ನಾನು ಗಂಡಾಗಿ ಹುಟ್ಟಿದ್ದೇನೆ, ಆದರೆ ನನ್ನ ಅಸ್ಮಿತೆ ಹೆಣ್ತನ ಎಂಬುದು ನನಗೆ ಯಾವಾಗಲೂ ತಿಳಿದಿತ್ತು. ಅರಿವಿನ ಹೆಚ್ಚಳ, ನನ್ನ ಸ್ವಂತ ಆತ್ಮವಿಶ್ವಾಸ ಮತ್ತು ಶಕ್ತಿಯೊಂದಿಗೆ ನಾನು ಈಗ ಮಹಿಳೆಯಾಗಿ ಪರಿವರ್ತನೆ ಹೊಂದಿದ್ದೇನೆ. ಆದಾಗ್ಯೂ, ನಿಮ್ಮ ವ್ಯಾಖ್ಯಾನದಲ್ಲಿ ನಾನು ‘ಜೈವಿಕ ಮಹಿಳೆ’ ಅಲ್ಲ. ನಿಮ್ಮ ಪ್ರಕಾರ ಮದುವೆಯಾಗಲು ಅರ್ಹಳಲ್ಲ. ಜೈವಿಕವಾಗಿ ಮಹಿಳೆಯರಲ್ಲದ ನಮ್ಮಂಥವರಿಗೆ ಮದುವೆಯನ್ನು ನಿರಾಕರಿಸುವುದು ಸಮಾನತೆಯ ತತ್ವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿನ ನಿರಾಕರಣೆಯಾಗಿರುತ್ತದೆ” ಎಂದು ಟೀಕಿಸಿದ್ದಾರೆ.

“ನನ್ನ ಹೊರತಾಗಿ ಜೈವಿಕವಾಗಿ ಹೆಣ್ಣಲ್ಲದ ಅಥವಾ ಜೈವಿಕವಾಗಿ ಪುರುಷನಲ್ಲದ ಇನ್ನೂ ಅನೇಕರಿದ್ದಾರೆ. ಈ ವರ್ಗಕ್ಕೆ ಮದುವೆಯನ್ನು ನಿರಾಕರಿಸಿದರೆ – ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆದೇಶದ ಉಲ್ಲಂಘನೆಯಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಇಲ್ಲ ಎಂದು ನೀವು ಭಾವಿಸುತ್ತಿರುವುದು ನನಗೆ ಆಶ್ಚರ್ಯವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಯಾವಾಗಲೂ ವಿಭಿನ್ನ ರೀತಿಯ ಪ್ರೀತಿ ಮತ್ತು ವಿಭಿನ್ನ ರೀತಿಯ ಮದುವೆಗೆ ಅವಕಾಶ ಕಲ್ಪಿಸಿವೆ. ನೀವು ಹೇಳುವಂತೆ ನಮ್ಮ ಶತಮಾನಗಳ ಹಳೆಯ ಸಂಪ್ರದಾಯಗಳು ಹೋಮೋಫೋಬಿಕ್ ಮತ್ತು ಟ್ರಾನ್ಸ್‌ಫೋಬಿಕ್ ಅಲ್ಲ. ಸಲಿಂಗಿಗಳು, ದ್ವಿಲಿಂಗಿಗಳು, ಇಂಟರ್‌ಸೆಕ್ಸ್, ಲೆಸ್ಬಿಯನ್‌ ಮತ್ತು ಟ್ರಾನ್ಸ್‌ಜೆಂಡರ್‌ಗಳು ಎಲ್ಲರನ್ನೂ ಒಳಗೊಂಡ ವೈವಿಧ್ಯಮಯ ಮನುಷ್ಯಕುಲವನ್ನು ಇದು ಹೊಂದಿದೆ” ಎಂದು ಹೇಳಿದ್ದಾರೆ.

“…ಸುಪ್ರೀಂ ಕೋರ್ಟ್ ವಿಶೇಷ ವಿವಾಹ ಕಾಯಿದೆಯ ನಿಬಂಧನೆಗಳನ್ನು ಮಾತ್ರ ಪರಿಗಣಿಸುತ್ತಿರುವುದರಿಂದ ನಿಮ್ಮ ಭಯವು ಅನಗತ್ಯವೆಂದು ತೋರುತ್ತದೆ. ಈ ತಾಂತ್ರಿಕ ಸ್ಪಷ್ಟೀಕರಣವು ನಿಮ್ಮ ಕಳವಳವನ್ನು ನಿವಾರಿಸುತ್ತದೆ. ನಿಮ್ಮ ಭಾಷಣದಲ್ಲಿ ನೀವು ನ್ಯಾಯಾಲಯಕ್ಕೆ ‘ರಾಷ್ಟ್ರದ ಸಂಸ್ಕೃತಿ ಮತ್ತು ಚಿಂತನೆಗಳಿಗೆ ವಿರುದ್ಧವಾದ ತೀರ್ಪು ನೀಡಬೇಡಿ’ ಎಂದು ಸಲಹೆ ನೀಡಿದ್ದು ನೋಡಿ ನನಗೆ ಆಶ್ಚರ್ಯವಾಯಿತು. ನ್ಯಾಯಾಲಯಗಳು ‘ಸಾಂಸ್ಕೃತಿಕ ತತ್ವ’ಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧರಿಸುತ್ತವೆ. ನ್ಯಾಯಾಧೀಶರು ಅನ್ವಯಿಸಲು ಬದ್ಧರಾಗಿರುವ ನೈತಿಕತೆಯು ಜನಪ್ರಿಯ ನೈತಿಕತೆಯಲ್ಲ- ಅದು ಸಾಂವಿಧಾನಿಕ ನೈತಿಕತೆಯಾಗಿದೆ” ಎಂದು ತಿಳಿಸಿದ್ದಾರೆ.

“ಸಾಂವಿಧಾನಿಕ ನೈತಿಕತೆಯು ಸ್ವಾಭಾವಿಕ ಭಾವನೆಯಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್‌ ಅವರು ಹೇಳಿದ್ದನ್ನು ನಿಮಗೆ ನೆನಪಿಸಲು ಬಯಸುತ್ತೇನೆ… ನಮ್ಮ ಜನರು ಇನ್ನೂ ಕಲಿಯಬೇಕಾಗಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು… ಸಾಂವಿಧಾನಿಕ ನೈತಿಕತೆಯನ್ನು ರಕ್ಷಿಸುವುದು ನ್ಯಾಯಾಲಯಗಳ ಜವಾಬ್ದಾರಿಯಾಗಿದೆ. ಸಂವಿಧಾನದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯವನ್ನು ನಿರ್ಧರಿಸುತ್ತದೆ ಹೊರತು ಸಾಂಸ್ಕೃತಿಕ ನೀತಿಯಿಂದಲ್ಲ. ಭಾರತದ LGBTQI ನಾಗರಿಕರ ಸಮಾನತೆ ಮತ್ತು ಘನತೆಯ ಹಕ್ಕನ್ನು ಕೋರ್ಟ್ ರಕ್ಷಿಸುತ್ತದೆ ಎಂ‌ಬ ವಿಶ್ವಾಸ ನನಗಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

“‘ಎಡ/ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ನೀವು ಭಾವಿಸುವುದು ತಪ್ಪಾಗಿದೆ. ನಾನು ಟ್ರಾನ್ಸ್‌ಜೆಂಡರ್‌ ಸಮುದಾಯದ ಭಾಗವಾಗಿದ್ದೇನೆ ಎಂದು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ಈ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿದೆ.‍ ಎಲ್ಲರೂ ಮದುವೆಯಾಗಬಹುದು ಎಂಬ ಹಕ್ಕಿಗಾಗಿ ನಾನು ಹೋರಾಡುತ್ತಿದ್ದೇನೆ. ಆ ಮೂಲಕ ನಾನು ಎಲ್ಲ ವ್ಯಕ್ತಿಗಳಿಗೂ ಸಮಾನತೆ ಮತ್ತು ಘನತೆಯ ಹಕ್ಕಿಗಾಗಿ ಹೋರಾಡುತ್ತಿದ್ದೇನೆ. ಎಲ್ಲರೂ ಮದುವೆಯಾಗಬಹುದೆಂಬುದು ಈ ನೆಲದ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಆಳವಾಗಿ ಬೇರೂರಿದೆ. ನೀವು ನಿಮ್ಮ ಮಾತುಗಳ ಮೂಲಕ ಎಲ್‌ಜಿಬಿಟಿಕ್ಯೂಐ ಸಮುದಾಯಕ್ಕೆ ನೋವುಂಟು ಮಾಡಿದ್ದೀರಿ. ಹೀಗಾಗಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...