Homeಮುಖಪುಟಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ನಿವೃತ್ತಿ ಘೋಷಣೆ

ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ನಿವೃತ್ತಿ ಘೋಷಣೆ

- Advertisement -
- Advertisement -

ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, 2024ರ ಸಾರ್ವತ್ರಿಕ ಚುನಾವಣೆಗೆ ಮೊದಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.

70ರ ದಶಕದ ಆರಂಭದಲ್ಲಿ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿದ್ದ ಸುಶೀಲ್ ಕುಮಾರ್ ಶಿಂಧೆಗೆ ಇದೀಗ 83 ವರ್ಷ ವಯಸ್ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಪ್ರಣಿತಿ ಶಿಂಧೆ ಸೊಲ್ಲಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

42 ವರ್ಷ ವಯಸ್ಸಿನ ಪ್ರಣಿತಿ ಶಿಂಧೆ ಅವರು ಸತತ ಮೂರು ಅವಧಿಗೆ ಸೋಲಾಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಸುಶೀಲ್ ಕುಮಾರ್ ಶಿಂಧೆ ಬಳಿಕ ಪುತ್ರಿ ಪ್ರಣಿತಿ ಶಿಂಧೆ ರಾಷ್ಟ್ರ ರಾಜಕಾರಣಕ್ಕೆ ತೆರಳುವ ಉದ್ದೇಶದಿಂದ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.

2014ರ ಚುನಾವಣೆಯ ನಂತರ ತನ್ನ ಮಗಳಿಗೆ ಕ್ಷೇತ್ರವನ್ನು ಬಿಟ್ಟುಕೊಡುವ ಇಂಗಿತವನ್ನು ಶಿಂಧೆ  ವ್ಯಕ್ತಪಡಿಸಿದ್ದರು. ಇದು ಅವರ ಅಂತಿಮ ಸ್ಪರ್ಧೆ ಎಂದು ಘೋಷಿಸಿದ್ದರು. ಚುನಾವಣಾ ಹಿನ್ನಡೆಯ ನಡುವೆಯೂ ಅವರು ತಮ್ಮ ರಾಜಕೀಯ ಪ್ರಯಾಣವನ್ನು ಮುಂದುವರೆಸಿದ್ದರು. 2014 ಮತ್ತು 2019ರಲ್ಲಿ  ಸೋಲಾಪುರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದರು.

ಶಿಂಧೆ ಅವರು ಸೋಲಾಪುರ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇವರು 2002ರಲ್ಲಿ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.  ಜನವರಿ 2003ರಿಂದ ನವೆಂಬರ್ 2004ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಬಳಿಕ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

ಮನಮೋಹನ್ ಸಿಂಗ್ ಸರ್ಕಾರದಲ್ಲಿ ದೇಶದ ವಿದ್ಯುತ್ ಇಲಾಖೆಯ ಸಚಿವ ಸ್ಥಾನವನ್ನು ಮತ್ತು 2012ರಲ್ಲಿ ಗೃಹ ಸಚಿವರಾಗಿ ನೇಮಕಗೊಂಡಿದ್ದರು.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...