Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...