Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....