Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...