Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...