Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...