Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...