Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...