Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...