Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...