Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...