Homeಅಂತರಾಷ್ಟ್ರೀಯಗುಜರಾತ್ ಬಳಿಯ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಒಳನುಸುಳುಕೋರನ ಹತ್ಯೆ!

ಗುಜರಾತ್ ಬಳಿಯ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಒಳನುಸುಳುಕೋರನ ಹತ್ಯೆ!

- Advertisement -
- Advertisement -

ಗುಜರಾತ್ ಮತ್ತು ರಾಜಸ್ಥಾನದ ಸಮೀಪವಿರುವ ಅಂತರರಾಷ್ಟ್ರೀಯ ಗಡಿಯ ಬಳಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶನಿವಾರ ಗುಂಡಿಕ್ಕಿ ಕೊಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಗಸ್ಟ್ 7 ಮತ್ತು 8 ರ ಮಧ್ಯರಾತ್ರಿಯಲ್ಲಿ ಘಟನೆ ನಡೆದಿದೆ. ಬಿಎಸ್ಎಫ್ ನ ರಾತ್ರಿ ಗಸ್ತು ತಂಡವು ಗಡಿ ಬೇಲಿ ಮೇಲೆ ಹತ್ತಿದ ವ್ಯಕ್ತಿಯನ್ನು ಗುರುತಿಸಿ ಶರಣಾಗಲು ಸೂಚಿಸಿತ್ತು ಎನ್ನಲಾಗಿದೆ.

ಬಿಎಸ್ಎಫ್ ಅಧಿಕಾರಿಗಳ ಪ್ರಕಾರ, ನುಸುಳುಕೋರನು ಸವಾಲು ಹಾಕಿ, ಗಡಿ ಬೇಲಿ ದಾಟಿದ ನಂತರ ಗುಂಡು ಹಾರಿಸಿದ್ದಾನೆ. ಆಗ ಕತ್ತಲೆಯಾಗಿದ್ದರಿಂದ ನಮ್ಮ ಪಡೆಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದವು ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಆತ ಗಡಿ ದಾಟಲು ಪ್ರಯತ್ನಿಸುತ್ತಿದ್ದಾನೆಯೇ ಎಂಬುದು ನಮಗೆ ತಿಳಿದಿಲ್ಲ ಎಂದು ಬಿಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುಂಡು ಹಾರಿಸಿದ ನಂತರ ನುಸುಳುಕೋರ ಪೊದೆಯ ಒಳಗೆ ಓಡಿಹೋಗಿದ್ದ ಎನ್ನಲಾಗಿದೆ. ಬಿಎಸ್ಎಫ್ ಸಿಬ್ಬಂದಿ ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ನಂತರ ಬೇಲಿಯ ಈಚೆಗೆ ಭಾರತದ ಭಾಗದಲ್ಲಿ ಶವ ಪತ್ತೆಯಾಗಿದೆ.

ಘಟನೆ ನಡೆದ ಸ್ಥಳ ಗುಜರಾತ್-ರಾಜಸ್ಥಾನ್ ಗಡಿಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿದೆ. ಅಲ್ಲಿ ರಾನ್ ಆಫ್ ಕಚ್ ಕೊನೆಗೊಳ್ಳುತ್ತದೆ ಮತ್ತು ರಾಜಸ್ಥಾನದ ಬಾರ್ಮರ್‌ನ ಮೊದಲ ಬಿಒಪಿ (ಬಾರ್ಡರ್ ಅಬ್ಸರ್ವೇಶನ್ ಪೋಸ್ಟ್) ಇದೆ ಎಂದು ಬಿಎಸ್ಎಫ್ ನ ಗಾಂಧಿನಗರ ಪ್ರಧಾನ ಕಚೇರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಎಸ್ಎಫ್ ನ ಅಧಿಕೃತ ಪ್ರಕಟಣೆಯ ಪ್ರಕಾರ, “ಅದೇ ಕ್ಷಣದಲ್ಲಿ, ಬಿಎಸ್ಎಫ್ ಪಡೆಗಳು ಪಾಕಿಸ್ತಾನದ ಕಡೆಯಿಂದ ಒಬ್ಬ ವ್ಯಕ್ತಿಯ ಚಲನೆಯನ್ನು ಗಮನಿಸಿತ್ತು. ಈ ಮೊದಲು, ಪಾಕಿಸ್ತಾನವು ಹಗಲಿನ ವೇಳೆಯಲ್ಲಿ ಮಾಡಿದ ಇದೇ ರೀತಿಯ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿತ್ತು. ಆದಾಗ್ಯೂ, ಈ ಪ್ರದೇಶದಲ್ಲಿ ರಾತ್ರಿಯ ಸಮಯದಲ್ಲಿ ಒಳನುಸುಳುವಿಕೆ ಪ್ರಯತ್ನ ನಡೆಯುತ್ತಿರುವುದು ಇದೇ ಮೊದಲು” ಎಂದು ತಿಳಿಸಿದೆ.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಗಮನದಲ್ಲಿಟ್ಟುಕೊಂಡು ಬಿಎಸ್ಎಫ್ ಹೆಚ್ಚಿನ ಎಚ್ಚರಿಕೆ ವಹಿಸಿದೆ ಎಂದು ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: ‘ಗಡಿಯಲ್ಲಿ ಏನೂ ಆಗಿಲ್ಲ, ಭಾರತ ಹಸಿ ಸುಳ್ಳುಗಳ ಸರಮಾಲೆ ಕಟ್ಟುತ್ತಿದೆ’: ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...