Homeಮುಖಪುಟಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದಾಳಿ” ಎಂದು ಶಂಕಿತ ಭಯೋತ್ಪಾದಕಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಎಂದು ಹೇಳಿದ ವಿವಾದ ಸೃಷ್ಟಿಸುವ ಮೂಲಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಅವರು 2008 ರ ಮಾಲೆಗಾಂವ್ ಸ್ಫೋಟದ ಶಂಕಿತ ಭಯೋತ್ಪಾದಕಿಯಾಗಿದ್ದಾರೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಮಾಜಿ ಬಿಜೆಪಿ ಸಂಸದೆಯೂ ಆಗಿರುವ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಗುರುವಾರ ಇಂದೋರ್‌ನಲ್ಲಿ ನಡೆದ ಮಹಾರಾಣಾ ಪ್ರತಾಪ್ ಜಯಂತಿಯಂದು ಈ ಹೇಳಿಕೆ ನೀಡಿದ್ದಾರೆ. ಬಲಪಂಥೀಯ ಸಂಘಟನೆ ಕರ್ಣಿ ಸೇನಾ ಭಾರತ್ ಆಯೋಜಿಸಿದ್ದ ‘ಪ್ರತಾಪ್ ಪರಾಕ್ರಮ್ ಯಾತ್ರೆ’ಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

“ಭಯೋತ್ಪಾದಕರು ಜನರ ಧಾರ್ಮಿಕ ಗುರುತುಗಳನ್ನು ಖಚಿತಪಡಿಸಿಕೊಂಡ ನಂತರ ಅಮಾಯಕರನ್ನು ಕೊಂದು ನಮ್ಮ ಸಹೋದರಿಯರನ್ನು ವಿಧವೆಯನ್ನಾಗಿ ಮಾಡಿದ ರೀತಿಯನ್ನು ಮುಸ್ಲಿಮರು ಹಿಂದೂಗಳ ಮೇಲೆ ನಡೆಸಿದ ದಾಳಿ ಎಂದು ಕರೆಯಬೇಕು” ಎಂದು ಅವರು ಹೇಳಿದ್ದಾರೆ.

“ಅಂತಹ ದಾಳಿಗಳು ನಡೆದಾಗಲೆಲ್ಲಾ ಹಿಂದೂಗಳು ಮುಸ್ಲಿಮರು ಮತ್ತು ಮುಸ್ಲಿಂ ಭಯೋತ್ಪಾದಕರ ಮೇಲೆಯೂ ದಾಳಿ ಮಾಡಬೇಕು” ಎಂದು ಅವರು ಹೇಳಿದ್ದು ವಿವಾದ ಸೃಷ್ಟಿಸಿದ್ದಾರೆ.

“ಇಂದಿನ ಪರಿಸ್ಥಿತಿ ಮಹಾರಾಣಾ ಪ್ರತಾಪ್ ಮೊಘಲರ ವಿರುದ್ಧ ಧೈರ್ಯದಿಂದ ಹೋರಾಡಿದಾಗ ಇದ್ದಂತೆಯೇ ಇದೆ. ಅದೇ ರೀತಿ, ಮೊಘಲರು ಇನ್ನೂ ನಮ್ಮನ್ನು ಮತ್ತು ನಮ್ಮ ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ನಾವು ನಮಗಾಗಿ ನಿಲ್ಲಬೇಕಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ಮತ್ತು ಪೃಥ್ವಿರಾಜ್ ಚೌಹಾಣ್ ಸೇರಿದಂತೆ ನಮ್ಮ ಎಲ್ಲಾ ಮಹಾನ್ ಆಡಳಿತಗಾರರು ಶತ್ರುಗಳನ್ನು ಎಂದಿಗೂ ಭಾಯಿ (ಸಹೋದರ) ಎಂದು ಸಂಬೋಧಿಸಬಾರದು ಎಂಬುದನ್ನು ನಮಗೆ ತೋರಿಸಿದ್ದಾರೆ. ಆದರೆ ಇಂದಿನ ದಿನಗಳಲ್ಲಿ ಜನರು ತಮ್ಮ ಸ್ವಂತ ಸಹೋದರರನ್ನು ಭಾಯಿ ಎಂದು ಸಂಬೋಧಿಸುವುದಿಲ್ಲ. ಬದಲಾಗಿ ಅವರು ವಿದರ್ಮಿಗಳನ್ನು (ಇತರ ಧಾರ್ಮಿಕ ನಂಬಿಕೆಗಳನ್ನು ಹೊಂದಿರುವವರು) ಭಾಯಿ ಎಂದು ಸಂಬೋಧಿಸುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ನೀವು ಅವರನ್ನು ಭಾಯಿ ಎಂದು ಕರೆಯುವುದನ್ನು ನಿಲ್ಲಿಸಿದ ದಿನ, ನೀವು ಸುರಕ್ಷಿತವಾಗಿರುತ್ತೀರಿ ಎಂಬುದನ್ನು ನೆನಪಿನಲ್ಲಿಡಿ ಎಂದು ಶಂಕಿತ ಭಯೋತ್ಪಾದಕಿ ತನ್ನ ಮುಸ್ಲಿಂ ದ್ವೇಷವನ್ನು ಕಾರಿಕೊಂಡಿದ್ದು, ದೇಶದ ಸೌಹಾರ್ದತೆ ಮತ್ತು ಬ್ರಾತೃತ್ವವನ್ನು ಹಾಳುಗೆಡವಲು ಪ್ರಯತ್ನಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಹೊಗಳಿದ್ದಾರೆ. “ಯುದ್ಧವನ್ನು ಏಕೆ ನಿಲ್ಲಿಸಲಾಯಿತು ಎಂದು ಜನರು ಕೇಳಿದರು. ಯುದ್ಧವು ಸಮಾನರ ನಡುವೆ ನಡೆಯುತ್ತದೆ, ಆನೆ ಎಂದಿಗೂ ನಾಯಿಯೊಂದಿಗೆ ಹೋರಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಂಕಿತ ಭಯೋತ್ಪಾದಕಿಯೊಂದಿಗೆ ಇಂದೋರ್ -2 ರ ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಕೂಡ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದರು ಎಂದು ವರದಿ ಹೇಳಿದೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...