Homeಮುಖಪುಟಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದಾಳಿ” ಎಂದು ಶಂಕಿತ ಭಯೋತ್ಪಾದಕಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಎಂದು ಹೇಳಿದ ವಿವಾದ ಸೃಷ್ಟಿಸುವ ಮೂಲಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಅವರು 2008 ರ ಮಾಲೆಗಾಂವ್ ಸ್ಫೋಟದ ಶಂಕಿತ ಭಯೋತ್ಪಾದಕಿಯಾಗಿದ್ದಾರೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಮಾಜಿ ಬಿಜೆಪಿ ಸಂಸದೆಯೂ ಆಗಿರುವ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಗುರುವಾರ ಇಂದೋರ್‌ನಲ್ಲಿ ನಡೆದ ಮಹಾರಾಣಾ ಪ್ರತಾಪ್ ಜಯಂತಿಯಂದು ಈ ಹೇಳಿಕೆ ನೀಡಿದ್ದಾರೆ. ಬಲಪಂಥೀಯ ಸಂಘಟನೆ ಕರ್ಣಿ ಸೇನಾ ಭಾರತ್ ಆಯೋಜಿಸಿದ್ದ ‘ಪ್ರತಾಪ್ ಪರಾಕ್ರಮ್ ಯಾತ್ರೆ’ಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

“ಭಯೋತ್ಪಾದಕರು ಜನರ ಧಾರ್ಮಿಕ ಗುರುತುಗಳನ್ನು ಖಚಿತಪಡಿಸಿಕೊಂಡ ನಂತರ ಅಮಾಯಕರನ್ನು ಕೊಂದು ನಮ್ಮ ಸಹೋದರಿಯರನ್ನು ವಿಧವೆಯನ್ನಾಗಿ ಮಾಡಿದ ರೀತಿಯನ್ನು ಮುಸ್ಲಿಮರು ಹಿಂದೂಗಳ ಮೇಲೆ ನಡೆಸಿದ ದಾಳಿ ಎಂದು ಕರೆಯಬೇಕು” ಎಂದು ಅವರು ಹೇಳಿದ್ದಾರೆ.

“ಅಂತಹ ದಾಳಿಗಳು ನಡೆದಾಗಲೆಲ್ಲಾ ಹಿಂದೂಗಳು ಮುಸ್ಲಿಮರು ಮತ್ತು ಮುಸ್ಲಿಂ ಭಯೋತ್ಪಾದಕರ ಮೇಲೆಯೂ ದಾಳಿ ಮಾಡಬೇಕು” ಎಂದು ಅವರು ಹೇಳಿದ್ದು ವಿವಾದ ಸೃಷ್ಟಿಸಿದ್ದಾರೆ.

“ಇಂದಿನ ಪರಿಸ್ಥಿತಿ ಮಹಾರಾಣಾ ಪ್ರತಾಪ್ ಮೊಘಲರ ವಿರುದ್ಧ ಧೈರ್ಯದಿಂದ ಹೋರಾಡಿದಾಗ ಇದ್ದಂತೆಯೇ ಇದೆ. ಅದೇ ರೀತಿ, ಮೊಘಲರು ಇನ್ನೂ ನಮ್ಮನ್ನು ಮತ್ತು ನಮ್ಮ ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ನಾವು ನಮಗಾಗಿ ನಿಲ್ಲಬೇಕಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ಮತ್ತು ಪೃಥ್ವಿರಾಜ್ ಚೌಹಾಣ್ ಸೇರಿದಂತೆ ನಮ್ಮ ಎಲ್ಲಾ ಮಹಾನ್ ಆಡಳಿತಗಾರರು ಶತ್ರುಗಳನ್ನು ಎಂದಿಗೂ ಭಾಯಿ (ಸಹೋದರ) ಎಂದು ಸಂಬೋಧಿಸಬಾರದು ಎಂಬುದನ್ನು ನಮಗೆ ತೋರಿಸಿದ್ದಾರೆ. ಆದರೆ ಇಂದಿನ ದಿನಗಳಲ್ಲಿ ಜನರು ತಮ್ಮ ಸ್ವಂತ ಸಹೋದರರನ್ನು ಭಾಯಿ ಎಂದು ಸಂಬೋಧಿಸುವುದಿಲ್ಲ. ಬದಲಾಗಿ ಅವರು ವಿದರ್ಮಿಗಳನ್ನು (ಇತರ ಧಾರ್ಮಿಕ ನಂಬಿಕೆಗಳನ್ನು ಹೊಂದಿರುವವರು) ಭಾಯಿ ಎಂದು ಸಂಬೋಧಿಸುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ನೀವು ಅವರನ್ನು ಭಾಯಿ ಎಂದು ಕರೆಯುವುದನ್ನು ನಿಲ್ಲಿಸಿದ ದಿನ, ನೀವು ಸುರಕ್ಷಿತವಾಗಿರುತ್ತೀರಿ ಎಂಬುದನ್ನು ನೆನಪಿನಲ್ಲಿಡಿ ಎಂದು ಶಂಕಿತ ಭಯೋತ್ಪಾದಕಿ ತನ್ನ ಮುಸ್ಲಿಂ ದ್ವೇಷವನ್ನು ಕಾರಿಕೊಂಡಿದ್ದು, ದೇಶದ ಸೌಹಾರ್ದತೆ ಮತ್ತು ಬ್ರಾತೃತ್ವವನ್ನು ಹಾಳುಗೆಡವಲು ಪ್ರಯತ್ನಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಹೊಗಳಿದ್ದಾರೆ. “ಯುದ್ಧವನ್ನು ಏಕೆ ನಿಲ್ಲಿಸಲಾಯಿತು ಎಂದು ಜನರು ಕೇಳಿದರು. ಯುದ್ಧವು ಸಮಾನರ ನಡುವೆ ನಡೆಯುತ್ತದೆ, ಆನೆ ಎಂದಿಗೂ ನಾಯಿಯೊಂದಿಗೆ ಹೋರಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಂಕಿತ ಭಯೋತ್ಪಾದಕಿಯೊಂದಿಗೆ ಇಂದೋರ್ -2 ರ ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಕೂಡ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದರು ಎಂದು ವರದಿ ಹೇಳಿದೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...