Homeಮುಖಪುಟಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ಭಾಗವಹಿಸುವ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಮ್ಮತಿ

ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ಭಾಗವಹಿಸುವ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಮ್ಮತಿ

- Advertisement -
- Advertisement -

ಶಂಕಿತ ಭಯೋತ್ಪಾದಕಿ, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಭಾಗವಹಿಸಲಿರುವ ಮಾಲೆಗಾಂವ್‌ನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ ಎಂದು ಇಂಡಿಯಾ ಟುಡೆ ಶನಿವಾರ ವರದಿ ಮಾಡಿದೆ. ಅವರು ಆಹ್ವಾನಿತರಾಗಿರುವ ಈ ಕಾರ್ಯಕ್ರಮವನ್ನು ಸಕಲ್ ಹಿಂದೂ ಸಮಾಜ ಆಯೋಜಿಸಿದ್ದು, ಭಾನುವಾರದಂದು ನಾಲ್ಕು ಗಂಟೆಗಳ ಕಾಲ ನಡೆಯಲಿದೆ ಎಂದು ವರದಿಯಾಗಿದೆ.

ಪ್ರಜ್ಞಾ ಸಿಂಗ್ ಠಾಕೂರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳಾಗಲಿದೆ ಎಂದು ಉಲ್ಲೇಖಿಸಿ ನಾಸಿಕ್ ಜಿಲ್ಲಾಡಳಿತವು ಆಡಳಿತವು ಆರಂಭದಲ್ಲಿ ಅನುಮತಿ ನಿರಾಕರಿಸಿತ್ತು. ಶಂಕಿತ ಭಯೋತ್ಪಾದಕಿ

2008 ರಲ್ಲಿ ಮಾಲೆಗಾಂವ್ ಮಸೀದಿಯ ಬಳಿ ಭೀಕರ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಪ್ರಕರಣದ ಆರೋಪಿಗಳಲ್ಲಿ ಪ್ರಜ್ಞಾ ಸಿಂಗ್ ಕೂಡಾ ಒಬ್ಬರಾಗಿದ್ದಾರೆ. ಕಾರ್ಯಕ್ರಮದ ಮತ್ತೊಬ್ಬ ಆಹ್ವಾನಿತ ಅತಿಥಿ ಮಿಲಿಂದ್ ಏಕಬೋಟೆ ಕೂಡ ದ್ವೇಷ ಭಾಷಣದ ಆರೋಪದ ಮೇಲೆ ಕಾನೂನು ಕ್ರಮ ಎದುರಿಸಿದ್ದಾರೆ.

ರಾಹುಲ್ ಬಚಾವ್ ನೇತೃತ್ವದ ಸಂಘಟಕರು ಫೆಬ್ರವರಿ 18 ರಂದು ತಮ್ಮ ಅರ್ಜಿಯನ್ನು ಸಲ್ಲಿಸಿದ್ದರೂ, ನಾಸಿಕ್ ಕಲೆಕ್ಟರ್, ತಹಶೀಲ್ದಾರ್ ಅಥವಾ ಸ್ಥಳೀಯ ಪೊಲೀಸರಿಂದ ಯಾವುದೇ ಔಪಚಾರಿಕ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದರ ನಂತರ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ಅನಧಿಕೃತವಾಗಿ ತಿಳಿಸಿರುವುದಾಗಿ ಮತ್ತು ಅನುಮೋದನೆ ಇಲ್ಲದೆ ಕಾರ್ಯಕ್ರಮ ನಡೆಸಿದರೆ ಮಧ್ಯಪ್ರವೇಶಿಸುವ ಎಚ್ಚರಿಕೆ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

‘ವಿರಾಟ್ ಹಿಂದೂ ಸಂತ ಸಮ್ಮೇಳನ’ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವು ಮಾರ್ಚ್ 30 ರಂದು ಗುಡಿ ಪಾಡ್ವಾದೊಂದಿಗೆ ಮಾಲೆಗಾಂವ್‌ನ ಸತಾನ ನಾಕಾದ ಯಶಸ್ವಿ ಕಾಂಪೌಂಡ್‌ನಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ನಡೆಯಲಿದೆ. ಸಭೆಯಲ್ಲಿ ಸ್ವಾಮಿ ಪ್ರಜ್ಞಾನಂದ್ ಸರಸ್ವತಿ ಮತ್ತು ನೀಲೇಶ್ ಚಂದ್ರ ಸೇರಿದಂತೆ ಹಲವಾರು ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿದ್ಧತೆಗಾಗಿ ಸಂಘಟಕರು ಈಗಾಗಲೇ ನಾಸಿಕ್‌ನಾದ್ಯಂತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...