Homeಮುಖಪುಟ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

- Advertisement -
- Advertisement -

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್‌ಗಳು ಬಹಿರಂಗವಾಗಿದ್ದು, ಅದರಲ್ಲಿನ ಮಾತುಕತೆ ಭಾರಿ ವಿವಾದಕ್ಕೀಡಾಗಿದೆ. ಈ ಬಗ್ಗೆ ಜನವರಿ 18 ರಂದು ಹೇಳಿಕೆ ಬಿಡುಗಡೆ ಮಾಡಿರುವ ನ್ಯೂಸ್ ಬ್ರಾಡ್‌‌ಕಾಸ್ಟ್ ಅಸೋಸಿಯೇಷನ್(NBA), “ರೇಟಿಂಗ್‌ಗಳನ್ನು ತಿರುಚುವಲ್ಲಿ ಇವರಿಬ್ಬರ ಕೈವಾಡವಿರುವುದು ಈ ವಾಟ್ಸಪ್ ಚಾಟ್‌ಗಳಿಂದ ದೃಡಪಟ್ಟಿದೆಯಾದ್ದರಿಂದ ಭಾರತೀಯ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್‌ನಿಂದ ರಿಪಬ್ಲಿಕ್ ಟಿವಿಯನ್ನು ಹೊರಹಾಕಬೇಕು” ಎಂದು ಒತ್ತಾಯಿಸಿದೆ.

NBA ಪತ್ರಿಕಾ ಪ್ರಕಟಣೆಯು, ತಿಂಗಳು ತಿಂಗಳು ಇತರ ಚಾನೆಲ್‌ಗಳ ರೇಟಿಂಗ್‌ಳನ್ನು ತಿರುಚುವ ಮುಖಾಂತರ ರಿಪಬ್ಲಿಕ್ ಟಿವಿಗೆ ಪ್ರಯೋಜನ ಮಾಡಿಕೊಡಲಾಗಿದೆ. ಅರ್ನಾಬ್ ಮತ್ತು ಪಾರ್ಥೋ ದಾಸ್‌ಗುಪ್ತಾ ನಡುವೆ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುವುದನ್ನು ನೋಡಿ ಆಘಾತವಾಯಿತು ಎಂದು ಅದು ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್‌ಟಿವಿ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಈ ವಿಷಯದ ಬಗ್ಗೆ ನ್ಯಾಯಾಲಯ ಆದೇಶ ನೀಡುವವರೆಗೂ ಟಿವಿಯನ್ನು ಬಾರ್ಕ್ ರೇಟಿಂಗ್ ವ್ಯವಸ್ಥೆಯಿಂದ ಹೊರಗಿಡುವಂತೆ ಅಸೋಸಿಯೇಷನ್ ಕರೆ ನೀಡಿದೆ. “ರೇಟಿಂಗ್‌ಗಳ ತಿರುಚುವಿಕೆಗೆ ಸಂಬಂಧಿಸಿ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇರುವವರೆಗೆ ರಿಪಬ್ಲಿಕ್ ಟಿವಿಯನ್ನು ಭಾರತೀಯ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್‌‌‌ ಸದಸ್ಯತ್ವವನ್ನು ತಕ್ಷಣದಿಂದಲೇ ಅಮಾನತುಗೊಳಿಸಬೇಕೆಂದು” ಅದು ಹೇಳಿದೆ.

“ಪ್ರಸ್ತುತ ವಾಟ್ಸಾಪ್ ಸಂದೇಶಗಳು ರೇಟಿಂಗ್‌ಗಳ ತಿರುಚುವಿಕೆಯನ್ನು ಪ್ರತಿಬಿಂಬಿಸುತ್ತದೆ ಮಾತ್ರವಲ್ಲದೆ, ವಿನಿಮಯವಾದ ಸಂದೇಶಗಳಲ್ಲಿ ಕಾರ್ಯದರ್ಶಿಗಳ ನೇಮಕ, ಕ್ಯಾಬಿನೆಟ್ ಪುನರ್ರಚನೆ, ಪ್ರಧಾನ ಮಂತ್ರಿಗಳ ಕಚೇರಿಗೆ ಪ್ರವೇಶ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳನ್ನು ನಿಯಂತ್ರಿಸುವ ಶಕ್ತಿಯಿದೆ ಎಂದು ತೋರಿಸುತ್ತದೆ” ಎಂದು ಅದು ಹೇಳಿದೆ.

ಬಾರ್ಕ್‌ನ‌ ತಿರುಚಿದ ಡೇಟಾದಿಂದಾಗಿ ಸುದ್ದಿ ಪ್ರಸಾರಕರಿಗೆ ಅಪಾರ ಆರ್ಥಿಕ ನಷ್ಟವಾಗಿದೆ. ಆದ್ದರಿಂದ ಕೌನ್ಸಿಲ್ ಇದಕ್ಕೆ ವಿವರಣೆಯನ್ನು ನೀಡಬೇಕು ಎಂದು NBA ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...