Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...