Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...